Your cart is empty now.
ವೃತ್ತಿಯಿಂದ ಸಿವಿಲ್ ಇಂಜಿನಿಯರ್ ಆಗಿರುವ ವಾಸುದೇವ್ ಮೂರ್ತಿ ಅವರು, ಒಬ್ಬ ಅತ್ಯುತ್ತಮ ಬರಹಗಾರರೂ ಆಗಿದ್ದಾರೆ. 25 ವರ್ಷಗಳಿಗಿಂತ ಹೆಚ್ಚು ಕಾಲ ಕಾರ್ಪೋರೇಟ್ ಸಂಸ್ಥೆಗಳಲ್ಲಿ ದುಡಿದ ಅನುಭವವುಳ್ಳ ಇವರು ಒಬ್ಬ ಅಂತರರಾಷ್ಟ್ರೀಯ ಮಾನ್ಯತೆ ಪಡೆದ ನಡವಳಿಕೆ ವಿಶ್ಲೇಷಕರಾಗಿದ್ದಾರೆ. ಕ್ರೈಮ್ ಥ್ರಿಲ್ಲರ್ಗಳನ್ನು ಬರೆಯುವುದರಲ್ಲಿ ಸಿದ್ಧಹಸ್ತರು. ಇವರ ಹಲವಾರು ಕಿರುಗತೆಗಳು ಕನ್ನಡದ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಇವರ ಮೊದಲ ಕೃತಿ, “ದಿ ಪರ್ಫೆಕ್ಟ್ ಮರ್ಡರ್” ಬಹಳಷ್ಟು ಮಂದಿಯ ಮೆಚ್ಚುಗೆಗೆ ಪಾತ್ರವಾಗಿದೆ.
ಹರಿವು ಬುಕ್ಸ್ನಿಂದ ಪ್ರಕಟವಾದ “ಪಾತಾಳ ಗರಡಿ” ಪುಸ್ತಕವು, 7 ಬಗೆಬಗೆಯ ಥ್ರಿಲ್ಲರ್ ಕತೆಗಳ ಗೊಂಚಲು. ಈ ಕತೆಗಳು ರೋಚಕ ಬರವಣಿಗೆಯ ಶೈಲಿಯಿಂದ ಓದುಗರಿಗೆ ಥ್ರಿಲ್ ನೀಡುವುದರಲ್ಲಿ ಯಾವ ಸಂಶಯವೂ ಇಲ್ಲ. ಅವರ ಬರವಣಿಗೆಯ ಶೈಲಿ ಓದುಗರನ್ನು ಮಂತ್ರಮುಗ್ಧಗೊಳಿಸುತ್ತದೆ. ಅಡಿಗಡಿಗೆ ಕುತೂಹಲದ ಕಡಲಿಗೆ ನೂಕಿ, ಊಟ ನಿದ್ದೆ ಬಿಟ್ಟು ಓದುವಂತೆ ಮಾಡುವ ಗುಣ ಈ ಕತೆಗಳಿವೆ. ಪತ್ತೇದಾರಿ ಕತೆಗಳನ್ನು ಓದುವ ಪ್ರತಿಯೊಬ್ಬರಿಗೂ ಈ ಪುಸ್ತಕ ಖಂಡಿತ ಇಷ್ಟವಾಗಲಿದೆ.
• We deliver the books you order at beetlebookshop within 3-4 working days via india speed post .
Return of any defective / damage item should be done within 7 days from the date of the receipt of the shipment to our working office.