Free Shipping Above ₹500 | COD available

Nillu Nille Patanga ( Novel ) Sale -10%
Rs. 135.00Rs. 150.00
Vendor: BEETLE BOOK SHOP
Type: PRINTED BOOKS
Availability: 6 left in stock

ನಿಲ್ಲು ನಿಲ್ಲೇ ಪತಂಗ ಕಾದಂಬರಿ ನಿಮ್ಮನ್ನು ಒಂದೇ ಸಲಕ್ಕೆ ಪೂರ್ಣಚಂದ್ರ ತೇಜಸ್ವಿಯವರ ಊರಿಗೆ ಹೊತ್ತೊಯ್ಯುತ್ತದೆ. ಅಲ್ಲಿ ಕರ್ವಾಲೋ ಚಿಕ್ಕಪ್ಪನಂತೆ ಕಾಣುವ ಫಣಿಕ್ಕರ್ ನಿಮಗೆ ಸಿಗುತ್ತಾರೆ. ಅವರ ಹುಡುಕಾಟದ ಹಾದಿಯಲ್ಲಿ ನೀವು ಊಹಿಸಿರದ ಅಪೂರ್ವ ಘಟನೆಯೊಂದು ನಡೆದು ಮೈತುಂಬ ಚಿಟ್ಟೆ ಮೂಡಿದಂತೆ ರೋಮಾಂಚನವಾಗುತ್ತದೆ. ಹರೀಶ್ ಕೇರ ಪುರಸೊತ್ತು ಸಿಕ್ಕಾಗೆಲ್ಲ ಕಾಡು ಸುತ್ತುತ್ತಿರುತ್ತಾರೆ. ಅವರಿಗೆ ಮನುಷ್ಯರಿಗಿಂತ ಮರಗಳೇ ಪ್ರಿಯ. ಮಾತಿಗಿಂತ ಮೌನವೇ ಆಪ್ಯಾಯಮಾನ. ಈ ಕತೆಯುದ್ದಕ್ಕೂ ಕಾಡಿಗಷ್ಟೇ ವಿಶಿಷ್ಟವಾಗಿರುವ ನೀರವ, ನಿಗೂಢ, ವಿಸ್ಮಯ ಮತ್ತು ವಿನೀತಗೊಳಿಸುವ ಗುಣ ದಟ್ಟ ಕಾಡಿನಂತೆ ಹಬ್ಬಿಕೊಂಡಿದೆ.

ತಿಳಿನೀರಿನಂಥ ಭಾಷೆ, ಆಪ್ತರಂತೆ ಬಂದುಹೋಗುವ ಪಾತ್ರಗಳು, ಬೆರಗಿನ ಜತೆಗೇ ಎದುರಾಗುವ ಭಯವಿಹ್ವಲ ಸಂಗತಿಗಳು ಈ ಕಥನವನ್ನು ದೈನಿಕದ ಯಾತನಾಮಯ ಚಕ್ರಸುಳಿಯಿಂದ ಹೊರಗಿಟ್ಟಿವೆ. ಮುಟ್ಟಿದರೆ ಭಟ್ಟನೆ ನೀರಾಗಿಬಿಡುವ ಮಂಜುಹನಿ ನೆಲೆಸಿರುವ ಹುಲ್ಲುದಾರಿಯಲ್ಲಿ ಮುಂಜಾನೆ ಹೆಜ್ಜೆಹಾಕುತ್ತಾ ಹೋದಹಾಗೆ, ಎದುರಿನ ಕಣಿವೆಯಿಂದ ಇಷ್ಟಿಷ್ಟೇ ಮೂಡುವ ಸೂರ್ಯ ನಮ್ಮ ಚೈತನ್ಯವನ್ನು ಬೆಳಗುವಂತೆ, ಈ ಕತೆ ತೆರೆದುಕೊಳ್ಳುತ್ತಾ ಹೋದಂತೆ ಇನ್ನೊಂದು ಜಗತ್ತು ನಮ್ಮನ್ನು ಸ್ವಾಗತಿಸುತ್ತದೆ.

ಈ ಮರುಳುಗೊಳಿಸುವ ಕದನಕ್ಕಾಗಿ ನಾನು ಹರೀಶ್ ಕೇರ ಅವರನ್ನು ಅಭಿನಂದಿಸುತ್ತೇನೆ. ಪೂರ್ಣಚಂದ್ರ ತೇಜಸ್ವಿ ನಮ್ಮನ್ನು ಅಷ್ಟೊಂದು ಪ್ರಭಾವಿಸದೇ ಹೋಗಿದ್ದರೆ ಇಂಥದ್ದೊಂದು ಕಾದಂಬರಿಯೇ ಸಾಧ್ಯವಾಗುತ್ತಿರಲಿಲ್ಲ. ಸಾಹಿತ್ಯ ಪರಂಪರೆಗೂ ಸಾಹಿತ್ಯಕ್ಕೂ ಇರುವ ಸಂಬಂಧವೇ ಅಂಥದ್ದು. ಇಂದು ಅರಳಿದ ಹೂವು ನಾಳೆ ಹುಟ್ಟಲಿರುವ ಹೂವಿನ ಗಿಡಕ್ಕೆ ಸಹಜಸ್ಫೂರ್ತಿ.

- ಜೋಗಿ

Guaranteed safe checkout

Nillu Nille Patanga ( Novel )
- +

ನಿಲ್ಲು ನಿಲ್ಲೇ ಪತಂಗ ಕಾದಂಬರಿ ನಿಮ್ಮನ್ನು ಒಂದೇ ಸಲಕ್ಕೆ ಪೂರ್ಣಚಂದ್ರ ತೇಜಸ್ವಿಯವರ ಊರಿಗೆ ಹೊತ್ತೊಯ್ಯುತ್ತದೆ. ಅಲ್ಲಿ ಕರ್ವಾಲೋ ಚಿಕ್ಕಪ್ಪನಂತೆ ಕಾಣುವ ಫಣಿಕ್ಕರ್ ನಿಮಗೆ ಸಿಗುತ್ತಾರೆ. ಅವರ ಹುಡುಕಾಟದ ಹಾದಿಯಲ್ಲಿ ನೀವು ಊಹಿಸಿರದ ಅಪೂರ್ವ ಘಟನೆಯೊಂದು ನಡೆದು ಮೈತುಂಬ ಚಿಟ್ಟೆ ಮೂಡಿದಂತೆ ರೋಮಾಂಚನವಾಗುತ್ತದೆ. ಹರೀಶ್ ಕೇರ ಪುರಸೊತ್ತು ಸಿಕ್ಕಾಗೆಲ್ಲ ಕಾಡು ಸುತ್ತುತ್ತಿರುತ್ತಾರೆ. ಅವರಿಗೆ ಮನುಷ್ಯರಿಗಿಂತ ಮರಗಳೇ ಪ್ರಿಯ. ಮಾತಿಗಿಂತ ಮೌನವೇ ಆಪ್ಯಾಯಮಾನ. ಈ ಕತೆಯುದ್ದಕ್ಕೂ ಕಾಡಿಗಷ್ಟೇ ವಿಶಿಷ್ಟವಾಗಿರುವ ನೀರವ, ನಿಗೂಢ, ವಿಸ್ಮಯ ಮತ್ತು ವಿನೀತಗೊಳಿಸುವ ಗುಣ ದಟ್ಟ ಕಾಡಿನಂತೆ ಹಬ್ಬಿಕೊಂಡಿದೆ.

ತಿಳಿನೀರಿನಂಥ ಭಾಷೆ, ಆಪ್ತರಂತೆ ಬಂದುಹೋಗುವ ಪಾತ್ರಗಳು, ಬೆರಗಿನ ಜತೆಗೇ ಎದುರಾಗುವ ಭಯವಿಹ್ವಲ ಸಂಗತಿಗಳು ಈ ಕಥನವನ್ನು ದೈನಿಕದ ಯಾತನಾಮಯ ಚಕ್ರಸುಳಿಯಿಂದ ಹೊರಗಿಟ್ಟಿವೆ. ಮುಟ್ಟಿದರೆ ಭಟ್ಟನೆ ನೀರಾಗಿಬಿಡುವ ಮಂಜುಹನಿ ನೆಲೆಸಿರುವ ಹುಲ್ಲುದಾರಿಯಲ್ಲಿ ಮುಂಜಾನೆ ಹೆಜ್ಜೆಹಾಕುತ್ತಾ ಹೋದಹಾಗೆ, ಎದುರಿನ ಕಣಿವೆಯಿಂದ ಇಷ್ಟಿಷ್ಟೇ ಮೂಡುವ ಸೂರ್ಯ ನಮ್ಮ ಚೈತನ್ಯವನ್ನು ಬೆಳಗುವಂತೆ, ಈ ಕತೆ ತೆರೆದುಕೊಳ್ಳುತ್ತಾ ಹೋದಂತೆ ಇನ್ನೊಂದು ಜಗತ್ತು ನಮ್ಮನ್ನು ಸ್ವಾಗತಿಸುತ್ತದೆ.

ಈ ಮರುಳುಗೊಳಿಸುವ ಕದನಕ್ಕಾಗಿ ನಾನು ಹರೀಶ್ ಕೇರ ಅವರನ್ನು ಅಭಿನಂದಿಸುತ್ತೇನೆ. ಪೂರ್ಣಚಂದ್ರ ತೇಜಸ್ವಿ ನಮ್ಮನ್ನು ಅಷ್ಟೊಂದು ಪ್ರಭಾವಿಸದೇ ಹೋಗಿದ್ದರೆ ಇಂಥದ್ದೊಂದು ಕಾದಂಬರಿಯೇ ಸಾಧ್ಯವಾಗುತ್ತಿರಲಿಲ್ಲ. ಸಾಹಿತ್ಯ ಪರಂಪರೆಗೂ ಸಾಹಿತ್ಯಕ್ಕೂ ಇರುವ ಸಂಬಂಧವೇ ಅಂಥದ್ದು. ಇಂದು ಅರಳಿದ ಹೂವು ನಾಳೆ ಹುಟ್ಟಲಿರುವ ಹೂವಿನ ಗಿಡಕ್ಕೆ ಸಹಜಸ್ಫೂರ್ತಿ.

- ಜೋಗಿ

• We deliver the books you order at beetlebookshop within 3-4 working days via india speed post .

Return of any defective / damage item should be done within 7 days from the date of the receipt of the shipment to our working office.