Free Shipping Above ₹500 | COD available

H S Venkatesha Murthy Nenapina Orate Sale -1%
Rs. 445.00Rs. 450.00
Vendor: Beetle Book Shop
Availability: 10 left in stock

ನೆನಪಿನ ಒರತೆ’ ಎಚ್.ಎಸ್. ವೆಂಕಟೇಶಮೂರ್ತಿ ಅವರ ಸಾಹಿತ್ಯ ಕೇಂದ್ರಿತ ಆತ್ಮಕಥೆಯಾಗಿದೆ. ಅಂಜನಾ ಹೆಗಡೆ ಕೃತಿಯನ್ನು ನಿರೂಪಿಸಿದ್ದಾರೆ. ಎಚ್ಚೆಸ್ವಿ ಅವರ ವೈಯುಕ್ತಿಕ ಜೀವನದ ಹಲವಾರು ಸಂಗತಿಗಳು ಅವರ ‘ಅನಾತ್ಮ ಕಥನ’ದಲ್ಲಿ ಈಗಾಗಲೇ ಮನೋಜ್ಞವಾಗಿ ನಿರೂಪಣೆಗೊಂಡಿವೆ. ‘ನೆನಪಿನ ಒರತೆ’ಯಲ್ಲಿ ಅವರು ತಮ್ಮ ಸಾಹಿತ್ಯಿಕ ಜೀವನದ ಸ್ಮರಣೀಯ ಮೈಲುಗಲ್ಲುಗಳನ್ನು ಅತ್ಯಂತ ವಿನಯ ಮತ್ತು ವಸ್ತುನಿಷ್ಠವಾಗಿ ದಾಖಲಿಸಿದ್ದಾರೆ. ತಾವು ಎದುರಿಸಿದ ಪ್ರತಿರೋಧಗಳನ್ನು, ಸಾಹಿತ್ಯಿಕ ವಾಗ್ವಾದಗಳನ್ನು ಸಮಚಿತ್ತದಿಂದ ನಿಭಾಯಿಸಿದ ಅವರ ರೀತಿ ಇಂದಿನ ಮತ್ತು ಮುಂದಿನ ಎಲ್ಲ ಸಾಹಿತಿಗಳಿಗೂ ಮಾದರಿಯಾಗಬಲ್ಲವು. ಕವಿಯಾಗಿ ಮಾತ್ರವಲ್ಲದೆ, ಕನ್ನಡ ಸಂಘದ ಸಂಸ್ಥಾಪಕರಾಗಿ, ಪು.ತಿ.ನ ಟ್ರಸ್ಟಿನ ಅಧ್ಯಕ್ಷರಾಗಿ, ‘ಅಭ್ಯಾಸ’ ಎಂಬ ಹಳಗನ್ನಡ ಸಾಹಿತ್ಯದ ಉಪನ್ಯಾಸ ಮಾಲಿಕೆಯ ನಿರ್ದೇಶಕರಾಗಿ ಅವರು ಸಲ್ಲಿಸಿದ ಸೇವೆಯ ಮಾಹಿತಿಯೂ ಇಲ್ಲಿದೆ. ಹೀಗೆ ಕಳೆದ ಐದಾರು ದಶಕಗಳ ಪರೋಕ್ಷ ಕನ್ನಡ ಸಾಹಿತ್ಯ ಚರಿತ್ರೆಯಾಗಿ ಈ ಕೃತಿ ಮಹತ್ವದ ಸ್ಥಾನ ಪಡೆದಿದೆ.

Categories:

Guaranteed safe checkout

H S Venkatesha Murthy Nenapina Orate
- +

ನೆನಪಿನ ಒರತೆ’ ಎಚ್.ಎಸ್. ವೆಂಕಟೇಶಮೂರ್ತಿ ಅವರ ಸಾಹಿತ್ಯ ಕೇಂದ್ರಿತ ಆತ್ಮಕಥೆಯಾಗಿದೆ. ಅಂಜನಾ ಹೆಗಡೆ ಕೃತಿಯನ್ನು ನಿರೂಪಿಸಿದ್ದಾರೆ. ಎಚ್ಚೆಸ್ವಿ ಅವರ ವೈಯುಕ್ತಿಕ ಜೀವನದ ಹಲವಾರು ಸಂಗತಿಗಳು ಅವರ ‘ಅನಾತ್ಮ ಕಥನ’ದಲ್ಲಿ ಈಗಾಗಲೇ ಮನೋಜ್ಞವಾಗಿ ನಿರೂಪಣೆಗೊಂಡಿವೆ. ‘ನೆನಪಿನ ಒರತೆ’ಯಲ್ಲಿ ಅವರು ತಮ್ಮ ಸಾಹಿತ್ಯಿಕ ಜೀವನದ ಸ್ಮರಣೀಯ ಮೈಲುಗಲ್ಲುಗಳನ್ನು ಅತ್ಯಂತ ವಿನಯ ಮತ್ತು ವಸ್ತುನಿಷ್ಠವಾಗಿ ದಾಖಲಿಸಿದ್ದಾರೆ. ತಾವು ಎದುರಿಸಿದ ಪ್ರತಿರೋಧಗಳನ್ನು, ಸಾಹಿತ್ಯಿಕ ವಾಗ್ವಾದಗಳನ್ನು ಸಮಚಿತ್ತದಿಂದ ನಿಭಾಯಿಸಿದ ಅವರ ರೀತಿ ಇಂದಿನ ಮತ್ತು ಮುಂದಿನ ಎಲ್ಲ ಸಾಹಿತಿಗಳಿಗೂ ಮಾದರಿಯಾಗಬಲ್ಲವು. ಕವಿಯಾಗಿ ಮಾತ್ರವಲ್ಲದೆ, ಕನ್ನಡ ಸಂಘದ ಸಂಸ್ಥಾಪಕರಾಗಿ, ಪು.ತಿ.ನ ಟ್ರಸ್ಟಿನ ಅಧ್ಯಕ್ಷರಾಗಿ, ‘ಅಭ್ಯಾಸ’ ಎಂಬ ಹಳಗನ್ನಡ ಸಾಹಿತ್ಯದ ಉಪನ್ಯಾಸ ಮಾಲಿಕೆಯ ನಿರ್ದೇಶಕರಾಗಿ ಅವರು ಸಲ್ಲಿಸಿದ ಸೇವೆಯ ಮಾಹಿತಿಯೂ ಇಲ್ಲಿದೆ. ಹೀಗೆ ಕಳೆದ ಐದಾರು ದಶಕಗಳ ಪರೋಕ್ಷ ಕನ್ನಡ ಸಾಹಿತ್ಯ ಚರಿತ್ರೆಯಾಗಿ ಈ ಕೃತಿ ಮಹತ್ವದ ಸ್ಥಾನ ಪಡೆದಿದೆ.

• We deliver the books you order at beetlebookshop within 3-4 working days via india speed post .

Return of any defective / damage item should be done within 7 days from the date of the receipt of the shipment to our working office.