Free Shipping Charge on Orders above ₹500. COD available

Shop Now

Mithya Sukha ( Novel ) Sale -20%
Rs. 292.00 Rs. 365.00
Vendor: BEETLE BOOK SHOP
Type: PRINTED BOOKS
Availability: 90 left in stock

ನಮ್ಮೊಡನೆ ಜೈವಿಕವಾಗಿ ಹೆಣೆದುಕೊಂಡಿರದ ಆದರೆ ನಾವು ಅನಿವಾರ್ಯವಾಗಿ ಕಟ್ಟಿಕೊಂಡ ಬದುಕಿನ ದೈನಿಕ ಲಯಗಳಲ್ಲಿ ಏನನ್ನೊ ಹುಡುಕುವುದು; ಅನೂಹ್ಯವಾದ, ಅತೀತವಾದ ಹಾಗೆಯೇ ಅಗಮ್ಯವಾದ ಮತ್ತಾವುದೋ ಸೆಳೆತಕ್ಕೆ ಈ ದೈನಿಕ ಲಯಗಳ ನಡುವೆ ಸಿಲುಕುವುದು; ಈ ಎರಡು ತುಯ್ತಗಳ ನಡುವೆ ಸಾಗುವ ಕಥನವಿದು. ಈ ಸೆಳೆತ ಕಾಣದುದರ ಎಡೆಗಿನ ತುಯ್ತವೋ ಅಥವಾ ಕಳೆದ ಅನುಭವವೊಂದರ ಮರುಕಳಿಕೆಯೋ ಎಂಬ ದ್ವಂದ್ವ ಕಾಣುತ್ತದೆ.

ದೈನಿಕ ಲಯಗಳ ನಿರೂಪಣೆಯಲ್ಲಿ ನಿರೂಪಕರು ಹೊರಗೆ ನಿಂತು ನೋಡುವ, ಮತ್ತು ಒಳಹೊಕ್ಕು ವಿವರಿಸುವುದನ್ನು ಎಚ್ಚರದಿಂದ ನಿವಾರಿಸಿಕೊಳ್ಳುವ ನೆಲೆಯನ್ನು ಅನುಸರಿಸುತ್ತಾರೆ. ಆದರೆ ಈ ದೈನಿಕ ಲಯಗಳ ನಡುವೆ ತಲೆಯೆತ್ತುವ ದೂರದ ಕರೆಯು ಪದಗಳಲ್ಲಿ, ಕವಿತೆಗಳಲ್ಲಿ, ನಾದದಲ್ಲಿ ಮೈಮುರಿದೇಳುತ್ತಿರುತ್ತದೆ. ಈ ಸೆಳೆತದ ಉತ್ಕಟತೆಗಳು ಒಂದು ಕಡೆ. ಆ ದೂರದ ಕರೆಯು ವಾಸ್ತವವಾಗಿ ಮೈದಳೆಯುವಾಗಿನ ಅನುಭವದಲ್ಲಿ ದಿಟ ಸಟೆಗಳ ನಡುವಣ ಗಡಿಗೆರೆಗಳು ಅಳಿಸಿ ಹೋಗುವುದು ಇನ್ನೊಂದು ಕಡೆ. ಈ ಎರಡು ತುದಿಗಳ ನಡುವಣ ಶೋಧವೇ ಈ ಕಾದಂಬರಿಯ ಗುರಿ ಎಂದು ತಿಳಿದಿರುವೆ.

ಅನುಭವ ಕಥನದ ನುಡಿಗಟ್ಟಿಗೂ ಅನುಭವ ಮಂಥನದ ನುಡಿಗಟ್ಟಿಗೂ ಇಲ್ಲಿ ಅಪಾರ ವ್ಯತ್ಯಾಸವಿದೆ. ಅನುಭವ ಕಥನದಲ್ಲಿ ಲೋಕದ ಬಿಂಬವಾಗಲು ನುಡಿಯು ಹವಣಿಸುತ್ತದೆ. ಆದರೆ ಅನುಭವ ಮಂಥನದಲ್ಲಿ ನುಡಿಯು ಮೈದಳೆಯುವ ಮೂಲಕವೇ ಅನುಭವವು ಆಕಾರ ಪಡೆಯುತ್ತದೆ. ಇದೇ ಕಾರಣದಿಂದ ಈ ಎರಡನೆಯ ನೆಲೆಯ ನಿರೂಪಣೆಯು ತೀವ್ರಗೊಂಡಾಗ ಕವಿತೆಗಳಾಗಿ ಮಾರ್ಪಡುವುದನ್ನು ಕಾಣುತ್ತೇವೆ.

ಅನುಭವ ಶೋಧದ ಹೊಸ ಮಾದರಿಯನ್ನು ಈ ಕಾದಂಬರಿಯಲ್ಲಿ ಭಾಷಿಕವಾಗಿ ಶೋಧಿಸಿರುವ ಕಾವ್ಯಾ ಕಡಮೆಯವರನ್ನು ಅಭಿನಂದಿಸಲೇಬೇಕು.

ಕೆ. ವಿ. ನಾರಾಯಣ

-
+

Guaranteed safe checkout

Mithya Sukha ( Novel )
- +

ನಮ್ಮೊಡನೆ ಜೈವಿಕವಾಗಿ ಹೆಣೆದುಕೊಂಡಿರದ ಆದರೆ ನಾವು ಅನಿವಾರ್ಯವಾಗಿ ಕಟ್ಟಿಕೊಂಡ ಬದುಕಿನ ದೈನಿಕ ಲಯಗಳಲ್ಲಿ ಏನನ್ನೊ ಹುಡುಕುವುದು; ಅನೂಹ್ಯವಾದ, ಅತೀತವಾದ ಹಾಗೆಯೇ ಅಗಮ್ಯವಾದ ಮತ್ತಾವುದೋ ಸೆಳೆತಕ್ಕೆ ಈ ದೈನಿಕ ಲಯಗಳ ನಡುವೆ ಸಿಲುಕುವುದು; ಈ ಎರಡು ತುಯ್ತಗಳ ನಡುವೆ ಸಾಗುವ ಕಥನವಿದು. ಈ ಸೆಳೆತ ಕಾಣದುದರ ಎಡೆಗಿನ ತುಯ್ತವೋ ಅಥವಾ ಕಳೆದ ಅನುಭವವೊಂದರ ಮರುಕಳಿಕೆಯೋ ಎಂಬ ದ್ವಂದ್ವ ಕಾಣುತ್ತದೆ.

ದೈನಿಕ ಲಯಗಳ ನಿರೂಪಣೆಯಲ್ಲಿ ನಿರೂಪಕರು ಹೊರಗೆ ನಿಂತು ನೋಡುವ, ಮತ್ತು ಒಳಹೊಕ್ಕು ವಿವರಿಸುವುದನ್ನು ಎಚ್ಚರದಿಂದ ನಿವಾರಿಸಿಕೊಳ್ಳುವ ನೆಲೆಯನ್ನು ಅನುಸರಿಸುತ್ತಾರೆ. ಆದರೆ ಈ ದೈನಿಕ ಲಯಗಳ ನಡುವೆ ತಲೆಯೆತ್ತುವ ದೂರದ ಕರೆಯು ಪದಗಳಲ್ಲಿ, ಕವಿತೆಗಳಲ್ಲಿ, ನಾದದಲ್ಲಿ ಮೈಮುರಿದೇಳುತ್ತಿರುತ್ತದೆ. ಈ ಸೆಳೆತದ ಉತ್ಕಟತೆಗಳು ಒಂದು ಕಡೆ. ಆ ದೂರದ ಕರೆಯು ವಾಸ್ತವವಾಗಿ ಮೈದಳೆಯುವಾಗಿನ ಅನುಭವದಲ್ಲಿ ದಿಟ ಸಟೆಗಳ ನಡುವಣ ಗಡಿಗೆರೆಗಳು ಅಳಿಸಿ ಹೋಗುವುದು ಇನ್ನೊಂದು ಕಡೆ. ಈ ಎರಡು ತುದಿಗಳ ನಡುವಣ ಶೋಧವೇ ಈ ಕಾದಂಬರಿಯ ಗುರಿ ಎಂದು ತಿಳಿದಿರುವೆ.

ಅನುಭವ ಕಥನದ ನುಡಿಗಟ್ಟಿಗೂ ಅನುಭವ ಮಂಥನದ ನುಡಿಗಟ್ಟಿಗೂ ಇಲ್ಲಿ ಅಪಾರ ವ್ಯತ್ಯಾಸವಿದೆ. ಅನುಭವ ಕಥನದಲ್ಲಿ ಲೋಕದ ಬಿಂಬವಾಗಲು ನುಡಿಯು ಹವಣಿಸುತ್ತದೆ. ಆದರೆ ಅನುಭವ ಮಂಥನದಲ್ಲಿ ನುಡಿಯು ಮೈದಳೆಯುವ ಮೂಲಕವೇ ಅನುಭವವು ಆಕಾರ ಪಡೆಯುತ್ತದೆ. ಇದೇ ಕಾರಣದಿಂದ ಈ ಎರಡನೆಯ ನೆಲೆಯ ನಿರೂಪಣೆಯು ತೀವ್ರಗೊಂಡಾಗ ಕವಿತೆಗಳಾಗಿ ಮಾರ್ಪಡುವುದನ್ನು ಕಾಣುತ್ತೇವೆ.

ಅನುಭವ ಶೋಧದ ಹೊಸ ಮಾದರಿಯನ್ನು ಈ ಕಾದಂಬರಿಯಲ್ಲಿ ಭಾಷಿಕವಾಗಿ ಶೋಧಿಸಿರುವ ಕಾವ್ಯಾ ಕಡಮೆಯವರನ್ನು ಅಭಿನಂದಿಸಲೇಬೇಕು.

ಕೆ. ವಿ. ನಾರಾಯಣ

• We deliver the books you order at beetlebookshop within 3-4 working days

Return of any defective / damage item should be done within 7 days from the date of the receipt of the shipment to our working office.

Translation missing: en.general.search.loading