Your cart is empty now.
Free Shipping Charge on Orders above ₹500. COD available
ವಸಾಹತುಪೂರ್ವ ಮತ್ತು ವಸಾಹತುಕಾಲೀನ ಭಾರತದ ಸಂದರ್ಭದಲ್ಲಿ ಆರ್ಥಿಕತೆಯ ಜೀವನಾಡಿಯಾಗಿದ್ದುದು ಕೃಷಿ ಮತ್ತು ಅದಕ್ಕೆ ಪೂರಕವಾಗಿದ್ದ ಕೈಗಾರಿಕೆಗಳ ವ್ಯವಸ್ಥೆಯೇ ಆಗಿದ್ದರೂ ಕರ್ನಾಟಕಕ್ಕೆ ಸಂಬಂಧಿಸಿ ಆ ಕುರಿತ ಅಧ್ಯಯನಗಳು ನಡೆದದ್ದು ಕಡಿಮೆಯೇ. ಈ ದೃಷ್ಟಿಯಿಂದ ಗೆಳೆಯ ಸಿದ್ದಲಿಂಗಸ್ವಾಮಿಯವರ ''ವಸಾಹತುಶಾಹಿ ಮೈಸೂರು ಸಂಸ್ಥಾನದ ಆರ್ಥಿಕ ಚರಿತ್ರೆ'' ಎಂಬ ಈ ಕೃತಿ ಸ್ವಾಗತಾರ್ಹವಾದುದು. 19ನೆಯ ಶತಮಾನಾರಂಭದಿಂದ ಹಿಡಿದು 20ನೇ ಶತಮಾನದ ಪೂರ್ವಾರ್ಧದ ವರೆಗಿನ ಅವಧಿಯ ಕರ್ನಾಟಕದ ಕೃಷಿ, ಕೃಷಿ ವ್ಯವಸ್ಥೆ, ಭೂ ಹಿಡುವಳಿ, ಭೂಕಂದಾಯ ವ್ಯವಸ್ಥೆಗಳು, ಔದ್ಯಮೀಕರಣ ಹಾಗೂ ನಗರೀಕರಣಗಳ ಪ್ರಕ್ರಿಯೆಯಲ್ಲಿ ಉಂಟಾದ ಕೃಷಿಯ ವಾಣಿಜೀಕರಣದಿಂದ ಉಂಟಾದ ಸ್ಥಿತ್ಯಂತರಗಳೇ ಮೊದಲಾದ ವಿಷಯಗಳನ್ನು ಸಿದ್ದಲಿಂಗಸ್ವಾಮಿಯವರು ವಿಮರ್ಶಾತ್ಮಕವಾಗಿ ಪರಿಶೀಲಿಸಿದ್ದಾರೆ.
• We deliver the books you order at beetlebookshop within 3-4 working days
Return of any defective / damage item should be done within 7 days from the date of the receipt of the shipment to our working office.